ನರೇಗಾ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಬಾಕಿ ಮೊತ್ತ ಪೂರ್ಣವಾಗಿ ಬಿಡುಗಡೆ! | ಜನತಾ ನ್ಯೂಸ್
ಬೆಂಗಳೂರು : ಕೇಂದ್ರ ಸರ್ಕಾರದ ನರೇಗಾ ಯೋಜನೆಯಡಿ ಬಾಕಿ ಮೊತ್ತ ಪೂರ್ಣವಾಗಿ ಬಿಡುಗಡೆ ಮಾಡಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನರೇಗಾ ಯೋಜನೆಯಡಿ ಬಾಕಿ ಮೊತ್ತ ಪೂರ್ಣವಾಗಿ ಬಿಡುಗಡೆ ಮಾಡಿದೆ ಇದರಲ್ಲಿ ನರೇಗಾ ಕಾಮಗಾರಿ ಮಾಡಿದ ಕೂಲಿ ಮೊತ್ತ ಮತ್ತು ಸಾಮಾಗ್ರಿ ಮೊತ್ತದ ಅನುದಾನವನ್ನು ಪೂರ್ಣ ಹಣವನ್ನು ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಮನವಿಯನ್ನು ಪರಿಗಣನೆ ಮಾಡಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಶ್ವರಪ್ಪನವರು ಧನ್ಯವಾದ ಸಲ್ಲಿಸಿದ್ದಾರೆ. ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಸಚಿವ ಗಿರಿರಾಜ್ ಸಿಂಗ್ ಅವರಿಗೂ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಒಟ್ಟು 959 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಇತ್ತೀಚಿಗೆ ದಿನಾಂಕ 07.09.2021 ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಅಭಿವೃದ್ಧಿ ಸಚಿವರಾದ ಗಿರರಾಜ್ ಸಿಂಗ್ ಅವರನ್ನು ಭೇಟಿಯಾಗಿ ನರೇಗಾ ಬಾಕಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗಿತ್ತು.