ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಗಂಡನನ್ನ ಕೊಂದು ಚರಂಡಿಗೆ ಎಸೆದ ಪತ್ನಿ | ಜನತಾ ನ್ಯೂಸ್
ತುಮಕೂರು : ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಂದು ಶವವನ್ನು ಚರಂಡಿಗೆ ಎಸೆದ ಘಟನೆ ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ನಾರಾಯಣ್(52) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವನ ಪತ್ನಿ ಅನ್ನಪೂರ್ಣ ಕೊಲೆ ಆರೋಪಿ. ನಾರಾಯಣಪ್ಪ ನೆಲಮಂಗಲ ಬಳಿಯ ಕಿಂಗ್ಫಿಷರ್ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ.
ಭಾನುವಾರ ಬಡ್ಡಿಹಳ್ಳಿಯ ಮನೆಯಲ್ಲಿ ನಾರಾಯಣಪ್ಪ ಹಾಗೂ ಪತಿ ಅನ್ನಪೂರ್ಣ ಜಗಳ ಆಡುತ್ತಿದ್ದು, ಗಂಡ-ಹೆಂಡತಿ ಜಗಳ ಅತಿರೇಕಕ್ಕೆ ಹೋಗಿದೆ. ಪತಿಯ ಮೇಲೆ ಅನ್ನಪೂರ್ಣ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾಳೆ. ಇದರಿಂದ ತಪ್ಪಿಸಿಕೊಳ್ಳಲು ಮನೆಯಿಂದ ಹೊರಬಂದ ನಾರಾಯಣಪ್ಪ ಮನೆ ಮುಂದಿನ ಚರಂಡಿಗೆ ಬಿದ್ದಿದ್ದಾನೆ. ಈ ವೇಳೆ ಮನೆಯಲ್ಲೇ ಇದ್ದ ರಾಮಕೃಷ್ಣ ಎಂಬಾತ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ನಾರಾಯಣಪ್ಪನ ತಲೆಮೇಲೆ ಕಲ್ಲು ಎತ್ತುಹಾಕಿದ್ದಾನೆ. ತೀವ್ರ ರಕ್ತಸ್ತ್ರಾವದಿಂದ ನಾರಾಯಣಪ್ಪ ಕೊನೆಯುಸಿರೆಳದಿದ್ದಾನೆ ಎನ್ನಲಾಗಿದೆ.
ಅನ್ನಪೂರ್ಣ ಅವರಿಗೆ ಅಕ್ರಮ ಸಂಬಂಧ ಇತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾರಾಯಣ್ ಮತ್ತು ಅನ್ನಪೂರ್ಣ ನಡುವೆ ಪ್ರತಿ ದಿನ ಜಗಳ ನಡೆಯುತ್ತಿತ್ತು. ಅನ್ನಪೂರ್ಣ ಇದೇ ವಿಚಾರಕ್ಕೆ ಗಂಡನನ್ನು ಹತ್ಯೆ ಮಾಡಿದ್ದಾಳೆ ಎಂಬ ಆರೋಪ ಬಂದಿದೆ.
ಮೃತ ನಾರಾಯಣ್ ನೆಲಮಂಗಲ ಬಳಿಯ ಟೋಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ತುಮಕೂರು ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.