ಕ್ವಾರಂಟೈನ್ ಕೇಂದ್ರದಲ್ಲಿ ನವ ವಿವಾಹಿತ ಆತ್ಮಹತ್ಯೆಗೆ ಶರಣು! | Janata news
ಬೀದರ್ : ಮುಂಬೈನಿಂದ ವಾಪಸ್ಸಾದ ಯುವಕನೊಬ್ಬ ಕ್ವಾರಂಟೈನ್ ಕೇಂದ್ರದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ ಜಿಲ್ಲೆ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾರಾಯಣಪುರ ಗ್ರಾಮದ ಸಚಿನ್ ತೇಜೆರಾವ್ ಜಾಧವ್ (21) ಮೃತ. ಮೇ 19ರಂದು ಪತ್ನಿ ಜತೆ ಸಚಿನ್ ತೇಜೆರಾವ್ ಮುಂಬೈನಿಂದ ಆಗಮಿಸಿದ್ದ. ಹಾಗಾಗಿ ಇವರಿಬ್ಬರನ್ನೂ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮ ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸಚಿನ್ ಜಾಧವ್(22) ಎಂಬಾತ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಗಳವಾರ ಬೆಳಗ್ಗೆ ಪತ್ನಿ ನೋಡಿದಾಗ ಪತಿ ಸಚಿನ್ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ನವ ದಂಪತಿ ವಾರದ ಹಿಂದಷ್ಟೇ ಅಂತರಜಾತಿ ವಿವಾಹ ಮಾಡಿಕೊಂಡಿದ್ದು, ಯುವಕನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ತಡರಾತ್ರಿವರೆಗೂ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು ಎಂಬ ಮಾಹಿತಿ ಇದೆ. ಔರಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.