ಮೇಲಧಿಕಾರಿಗಳ ಕಿರುಕುಳ ಆರೋಪ: ಬ್ಯಾಂಕಲ್ಲಿ live ಸೂಸೈಡ್ ಮಾಡ್ಕೊಂಡ ಲೀಗಲ್ ಅಡ್ವೈಸರ್! | Janata news
ಬಳ್ಳಾರಿ : ಮೇಲಾಧಿಕಾರಿ ಕಿರುಕುಳ ತಾಳಲಾರದೇ ಲೀಗಲ್ ಅಡ್ವೈಸರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆಯಲ್ಲಿ ಬ್ಯಾಂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹೇಶ್ (40) ಎಂಬ ಉದ್ಯೋಗಿ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ಮಹೇಶ್ ಹೊಸಪೇಟೆಯ ಶಾಖೆಯ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆಯಲ್ಲಿ ಬ್ಯಾಂಕ್ನಲ್ಲೇ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ಗೆ ಸರಿಯಾದ ದಾಖಲೆಗಳು ಇಲ್ಲದ್ದಿದ್ದರೂ ಗ್ರಾಹಕರಿಗೆ ಲೋನ್ ನೀಡುವಂತೆ ಒತ್ತಡ ಹೇರಲಾಗಿತ್ತಂತೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಬ್ಯುಸಿನೆಸ್ ಇಲ್ಲದ ಕಾರಣ ಕೆಲಸಗಾರರ ಮೇಲೆ ಒತ್ತಡದ ತಂತ್ರ ಬ್ಯಾಂಕ್ ಹೇರಿದೆ ಎಂಬ ಆರೋಪ ಕೇಳಿ ಬಂದಿದೆ.
ಕೆಲಸದಿಂದ ಬೇಸತ್ತ ಮಹೇಶ್ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ, ಈ ಬಗ್ಗೆ ತನ್ನ ತಾಯಿಯ ಬಳಿ ತಿಳಿಸಿದ್ದರು ಎನ್ನಲಾಗಿದೆ.