ತೆಂಗಿನ ಕಾಯಿ ಹಾಲು: ಆರೋಗ್ಯಕ್ಕೆ ಎಷ್ಟು ಉಪಯುಕ್ತ? | Janata news

30 Oct 2018
4990
Coconut Milk: How useful is our health?

ಬೆಂಗಳೂರು : ಕಾಮಧೇನು ಕಲ್ಪವೃಕ್ಷ ಎಂದರೆ ತೆಂಗಿನ ಗಿಡ. ಜೀವನದ ಪ್ರತಿ ಹಂತದಲ್ಲಿಯೂ ತೆಂಗಿನ ಅಗತ್ಯ ಒಂದಲ್ಲಾ ಒಂದು ರೀತಿಯಲ್ಲಿ ಇದ್ದೇ ಇರುತ್ತದೆ. ನೀವು ತೆಂಗಿನ ಎಣ್ಣೆಯ ಉಪಯೋಗ ಮಾಡಿರುತ್ತೀರಿ, ಅದರಂತೆಯೇ ತೆಂಗಿನ ಹಾಲಿನ ಉಪಯೋಗದ ಬಗ್ಗೆ ಕೆಲವರಿಗೆ ಅಷ್ಟೇನೂ ತಿಳಿದಿರುವುದಿಲ್ಲ, ತೆಂಗಿನಿಂದ ತೆಗೆದ ಹಾಲು ಕೂಡ ಆರೋಗ್ಯದಾಯಕ.

ತೆಂಗಿನ ಕಾಯಿ ತುರಿದು ತಿಳುವಾದ ಬಟ್ಟೆಯಲ್ಲಿ ಅದನ್ನು ಹಿಂಡಿ ಹಾಲು ತೆಗೆಯಬಹುದು ಇಲ್ಲವೇ ಮಿಕ್ಸಿಯಲ್ಲಿ ತೆಂಗಿನ ತುರಿ ಹಾಕಿ ಅದರಿಂದಲೂ ಹಾಲು ತೆಗೆಯಬಹುದು.
coconut-milk

ತೆಂಗಿನ ಕಾಯಿ ಹಾಲಿನ ಆರೋಗ್ಯ ಉಪಯೋಗಗಳು -

ಸೌಂದರ್ಯವರ್ಧಕ :
- ಜೇನು, ಗಂಧದ ಪುಡಿ, ಮುಲ್ತಾನಿ ಮಿಟ್ಟಿ, ಇತ್ಯಾದಿಗಳನ್ನು ಬೆರೆಸಿ ಮುಖಲೇಪಗಳನ್ನು ತಯಾರಿಸಿ ಹಚ್ಚ್ಚಿಕೊಳ್ಳುವುದರ ಮೂಲಕ ಚರ್ಮದ ಆರೈಕೆಯನ್ನು ಮಾಡಬಹುದು.
- ಮೂರು ದೊಡ್ಡ ಚಮಚ ತೆಂಗಿನ ಹಾಲು, ಒಂದು ಚಿಟಿಕೆ ಕಸ್ತೂರಿ, ಒಂದು ದೊಡ್ಡ ಚಮಚ ಜೇನು ಮತ್ತು ಒಂದು ದೊಡ್ಡ ಚಮಚ ಗಂಧದ ಪುಡಿ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಲೇಪವನ್ನು ಈಗತಾನೇ ತಣ್ಣೀರಿನಿಂದ ತೊಳೆದುಕೊಂಡ ಮುಖಕ್ಕೆ ಹಚ್ಚಿ ಹದಿನೈದು ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಂಡರೆ ತಕ್ಷಣವೇ ಚರ್ಮದ ಕಾಂತಿ ಹೆಚ್ಚುತ್ತದೆ.


ಸುಂದರ ಕೂದಲಿಗೆ :
- ಒರಟು ಕೂದಲಿಗೆ ಇದು ರಾಮ ಬಾಣ ಕೂದಲಿಗೆ ತೆಂಗಿನ ಹಾಲನ್ನು ಹಚ್ಚಿ ಮಸಾಜ್​ ಮಾಡಿ 20-30 ನಿಮಿಷ ಹಾಗೆ ಬಿಡಿ, ನಂತರ ಶ್ಯಾಂಪು ಮೂಲಕ ಕೂದಲನ್ನು ತೊಳೆಯಿರಿ.
- ತೆಂಗಿನ ಕಾಯಿಯಿಂದ ಹಾಲನ್ನು ತೆಗೆದು ಅದಕ್ಕೆ ಮೆಂತ್ಯ ಅರೆದು ಮಿಶ್ರಣ ಮಾಡಿ. ತಲೆಯ ಬುಡಕ್ಕೆ ಈ ಮಿಶ್ರಣವನ್ನು ಚೆನ್ನಾಗಿ ಹಚ್ಚಿ ಅದು ಒಣಗುವವರೆಗೆ ಬಿಡಿ (20 ರಿಂದ 25 ನಿಮಿಷ) ನಂತರ ತಲೆಯನ್ನು ಚೆನ್ನಾಗಿ ತೊಳೆಯಿರಿ. ಈ ರೀತಿ ಮಾಡುವುದರಿಂದ ಕೂದಲು ಉದುರುವ ಸಮಸ್ಯೆ, ಹೊಟ್ಟು ಸಮಸ್ಯೆಯಿಂದಲೂ ಮುಕ್ತಿ ಹೊಂದಬಹುದು.
coconut-milk

ಮೂಳೆ ಗಟ್ಟಿ :
- ದೇಹದ ಮೂಳೆ ಗಟ್ಟಿಯಾಗಲು ಕ್ಯಾಲ್ಶಿಯಮ್​ ಮತ್ತು ಪಾಸ್ಫರಸ್ ಅಂಶಗಳ ಅವಶ್ಯಕತೆ ಇದೆ, ಈ ಅಂಶಗಳು ತೆಂಗಿನ ಹಾಲಿನಲ್ಲಿ ನಿಮಗೆ ಸುಲಭವಾಗಿ ದೊರೆಯುತ್ತದೆ.
- ಸ್ನಾಯು, ನರಗಳಿಗೆ ಪ್ರಯೋಜನಕಾರಿ: ಸ್ನಾಯು ಸೆಳೆತ ಅಥವಾ ಸಹಿಸಲಾಗದ ನೋವಿಗೆ ತೆಂಗಿನ ಹಾಲು ರಾಮಬಾಣ.

ತೂಕ ಇಳಿಕೆ :
ತೆಂಗಿನ ಹಾಲು ನಿಮ್ಮ ದೇಹದ ಬೇಡವಾದ ಬೊಜ್ಜನ್ನ ಕರಗಿಸಲು ಸಹಾಯ ಮಾಡುತ್ತದೆ, ತೆಂಗಿನ ಕಾಯಿಯಲ್ಲಿ ಎಮ್​ಸಿಟಿ ಎಂಬುವ ಅಂಶವು ಹೇರಳವಾಗಿದ್ದು ದೇಹದ ಫ್ಯಾಟ್ ಮಟ್ಟವನ್ನು ಕಡಿಮೆ ಮಾಡು ಅತ್ಯಂತ ಸಹಾಯಕಾರಿ.
coconut-milk

ರಕ್ತಹೀನತೆ :
- ರಕ್ತಹೀನತೆಗೆ ಕಬ್ಬಿಣದ ಕೊರತೆಯೇ ಮುಖ್ಯ ಕಾರಣ. ಒಂದು ಕಪ್ ತೆಂಗಿನ ಹಾಲಿನಲ್ಲಿ ದಿನಕ್ಕೆ ಬೇಕಾದ ಕಾಲು ಭಾಗದ ಕಬ್ಬಿಣದ ಅಂಶ ಸಿಗುತ್ತದೆ.

ಹೃದಯದ ಅರೋಗ್ಯ :
- ತೆಂಗಿನ ಹಾಲಿನಲ್ಲಿ ಲ್ಯುರಿಕ್​ ಆ್ಯಸಿಡ್​ ಅಂಶ ಸಮೃದ್ಧವಾಗಿದೆ ಇದರಿಂದ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
aa

ಸನ್ ಬರ್ನ್ ಸಮಸ್ಯೆಗೆ :
- ತೆಂಗಿನ ಹಾಲು ಒಂದು ಕಪ್ ನಷ್ಟು ತೆಂಗಿನ ಹಾಲಿಗೆ , ಅದರ ಅರ್ಧದಷ್ಟು ಗುಲಾಬಿ ರಸವನ್ನು ಸೇರಿಸಿ. ಒಂದು ಬಾಟಲ್ ನಲ್ಲಿ ಈ ಮಿಶ್ರಣವನ್ನು ಹಾಕಿ ಪ್ರಿಡ್ಜ್ ನಲ್ಲಿಡಿ. ಯಾವಾಗ ಉರಿ ಉರಿ ಬಿಸಿಲಿನಿಂದ ಬಂದಾಗ ಈ ಮಿಶ್ರಣವನ್ನು ಹಚ್ಚಿಕೊಳ್ಳಿ. ಕೇವಲ ಮುಖಕ್ಕೆ ಮಾತ್ರವಲ್ಲ, ಕೈಗಳಿಗೆ ಮತ್ತು ಕುತ್ತಿಗೆಯ ಭಾಗದಲ್ಲಿ ಆಗುವ ಸನ್ ಬರ್ನ್ ಸಮಸ್ಯೆಗೂ ಕೂಡ ಇದು ಪರಿಹಾರ ನೀಡಲಿದೆ.

ಎಷ್ಟೊಂಸು ಉಪಗೋಯವಿದೆಯಲ್ಲವೇ ತೆಂಗಿನ ಹಾಲಿನಿಂದ. ನಿಮಗೆ ಇಷ್ಟವಾದಲ್ಲಿ ನಿಮ್ಮ ಫ್ರೆಂಡ್ಸ್ ನೊಂದಿಗೆ ಹಂಚಿಕೊಳ್ಳಿ . ಅವರಿಗೂ ತೆಂಗಿನ ಹಾಲಿನ ಉಪಯೋಗದ ಬಗ್ಗೆ ತಿಳಿಯಲಿ.
ಧನ್ಯವಾದ


---- ತಾಜಾ ಸುದ್ದಿಗಾಗಿ ಜನತಾ.ನ್ಯೂಸ್ FACEBOOK PAGE ಲೈಕ್ ಮಾಡಿ ----


coconut-milk

English summary :Coconut Milk: How useful is our health?

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ನ್ಯೂಸ್ MORE NEWS...