ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿಯಲ್ಲಿ ಗುತ್ತಿಗೆ ಹುದ್ದೆಗೆ ಅರ್ಜಿ ಅಹ್ವಾನ | Janata news
ಕಾರವಾರ : ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿಯಲ್ಲಿ ಖಾಲಿ ಇರುವ ಲೆಕ್ಕಿಗರು-ಕಂ-ಕಛೇರಿ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿರುತ್ತದೆ.
ಹುದ್ದೆಯು ಗೌರವಧನದಾಗಿದ್ದು ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿ,ಕಾಂ ಪದವಿ ಹೊಂದಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವ ಅಕೌಂಟೆಟ್ ಹುದ್ದೆಯಲ್ಲಿ ಕನಿಷ್ಟ 5 ವರ್ಷಗಳ ಅನುಭವ ಇರಬೇಕು. ಕಂಪ್ಯೂಟರ್ ಜ್ಞಾನದಲ್ಲಿ ಟ್ಯಾಲಿ, ಎಕ್ಸೆಲ್ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಅವಶ್ಯಕವಾಗಿರುತ್ತದೆ.
ಅರ್ಜಿಯೊಂದಿಗೆ ದೃಢೀಕೃತ ಎಲ್ಲಾ ದಾಖಲಾತಿಗಳೊಂದಿಗೆ ಖುದ್ದಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಕಛೇರಿ, ಕಾರ್ಮಿಕ ಅಧಿಕಾರಿಗಳ ಕಾರ್ಯಾಲಯ ಜಿ,ಕೆ ರಾಮ್ ಬಿಲ್ಡಿಂಗ್ ಎದುಗಡೆ ಹಬ್ಬುವಾಡ, ಕಾರವಾರ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220898 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.